Shivaraj Kumar: ಕುಮಾರ್ ಬಂಗಾರಪ್ಪ ಮನೆ ಮೇಲೆ ಶಿವಣ್ಣನ ಅಭಿಮಾನಿಗಳು ಮುತ್ತಿಗೆ ಹಾಕಿ ಮಾಡಿದ್ದೇನು?

Written by Soma Shekar

Published on:

---Join Our Channel---

Shivaraj Kumar : ಸ್ಯಾಂಡಲ್ವುಡ್ ನಟ ಶಿವರಾಜ್ ಕುಮಾರ್ (Shivaraj Kumar) ಅವರ ಅಭಿಮಾನಿಗಳು ಕುಮಾರ್ ಬಂಗಾರಪ್ಪ (Kumar Bangarappa) ಅವರ ಮನೆಗೆ ಮುತ್ತಿಗೆ ಹಾಕಿದ್ದಾರೆ. ನಟ ಶಿವರಾಜ್ ಕುಮಾರ್ ಮತ್ತು ದೊಡ್ಮನೆ ಕುರಿತಾಗಿ ಕುಮಾರ್ ಬಂಗಾರಪ್ಪ ಲಘುವಾಗಿ ಮಾತನಾಡಿದ್ದಾರೆ ಎನ್ನುವ ಕಾರಣಕ್ಕೆ ಸದಾಶಿವ ನಗರದಲ್ಲಿರುವ ಕುಮಾರ್ ಬಂಗಾರಪ್ಪನವರ ಮನೆಗೆ ಶಿವರಾಜ್ ಕುಮಾರ್ ಅವರ ಅಭಿಮಾ‌ನಿಗಳು ಮುತ್ತಿಗೆ ಹಾಕಿದ್ದು ಕುಮಾರ್ ಬಂಗಾರಪ್ಪ ಅವರು ಕ್ಷಮೆ ಕೇಳಬೇಕೆಂದು ಆಗ್ರಹಿಸಿದ್ದಾರೆ.

ಕುಮಾರ್ ಬಂಗಾರಪ್ಪ ಸವರ ಮನೆ ಮುಂದೆ ಶಿವಣ್ಣನ ಅಭಿಮಾನಿಗಳು ದಿಕ್ಕಾರ ಕೂಗಿದ್ದು ಪರಿಸ್ಥಿತಿ ವಿಕೋಪಕ್ಕೆ ತಿರುಗುವುದನ್ನ ನೋಡಿ ಕೂಡಲೇ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಈ ವೇಳೆ ಪೊಲೀಸರು ಮತ್ತು ಶಿವಣ್ಣನ ಅಭಿಮಾನಿಗಳ ನಡುವೆ ಮಾತಿನ ಚಕಮಕಿ ಸಹಾ ನಡೆದಿದೆ. ಪೋಲಿಸರು ಅಭಿಮಾನಿಗಳಿಗೆ ಅಲ್ಲಿಂದ ಹೋಗುವಂತೆ ಎಚ್ಚರಿಕೆಯನ್ನು ಸಹಾ ನೀಡಿದ್ದಾರೆ. ಈ ಘಟನೆಗೆ ಕಾರಣವೇನು ? ತಿಳಿಯೋಣ ಬನ್ನಿ.

ಕುಮಾರ್ ಬಂಗಾರಪ್ಪ ಅವರು ತಮ್ಮ ಸಹೋದರ ಮಧು ಬಂಗಾರಪ್ಪ (Madhu Bangarappa) ಮತ್ತು ಸಹೋದರಿ ಗೀತಾ ಶಿವರಾಜಕುಮಾರ್ (Geeta Shivaraj Kumar) ಅವರನ್ನು ಟೀಕಿಸುವ ವೇಳೆಯಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ ಶಿವರಾಜ್ ಕುಮಾರ್ ಅವರ ಬಗ್ಗೆ ಟೀಕೆಯನ್ನು ಮಾಡುತ್ತಾ, ಶಿವರಾಜ್ ಕುಮಾರ್ ನಿರುದ್ಯೋಗಿಯಾಗಿ ಇರಬೇಕಾಗಿಲ್ಲ, ನಮ್ಮೂರ ಜಾತ್ರೆಯಲ್ಲಿ ಕುಣಿಯುವ ಕೆಲಸಕ್ಕೆ ಅರ್ಜಿ ಹಾಕಿಕೊಳ್ಳಬಹುದು ಎಂದು ವ್ಯಂಗ್ಯ ಮಾಡಿದ್ದರು.

ಅಲ್ಲದೇ ನನ್ನ ತಂಗಿ ಸಿನಿಮಾ ಡಾನ್ ಆಗಿರೋದ್ರಿಂದ ಬೇಸರಕ್ಕೆ ಕಾರಣ ಇಲ್ಲ. ದೊಡ್ಮನೆಯ ವ್ಯವಹಾರ ಸಾಕಷ್ಟಿರುತ್ತದೆ. ಬೇರೆಯವರಿಗೆ ಅವಕಾಶ ಸಿಗಲಾರದು. ಹೆದರಿಸುವ, ಬೆದರಿಸುವ, ಹುಷಾರ್ ಎನ್ನುವ ಮಾತುಗಳೇನಿದ್ರೂ ಗಂಟಲೊಳಗೆ, ನಾಲ್ಕು ಗೋಡೆಗಳೊಳಗೆ, ತಮ್ಮ ಪಟಾಲಂ ಮುಂದೆ ಮಾತ್ರ ಚಾಲ್ತಿಯಲ್ಲಿರಬೇಕು ಎಂದಿದ್ದರು. ಈ ಮಾತುಗಳನ್ನು ಕೇಳಿ ಶಿವರಾಜ್ ಕುಮಾರ್ ಅಭಿಮಾನಿಗಳು ಸಿಟ್ಟಾಗಿದ್ದಾರೆ.

Leave a Comment