Entertainment

Actor Yash: ಯಶ್ ರಾವಣನಲ್ಲ, ಆದ್ರೆ ಅದಕ್ಕಿಂತ ಹೆಚ್ಚು, ರಾಮಾಯಣ ಸಿನಿಮಾ ಅಪ್ಡೇಟ್ ಕೇಳಿ ಥ್ರಿಲ್ ಆದ ಫ್ಯಾನ್ಸ್

Actor Yash: ರಾಮಾಯಣ (Ramayana) ಬಾಲಿವುಡ್ ನಲ್ಲಿ (Bollywood) ನಿರ್ಮಾಣ ಆಗ್ತಿರೋ ಭಾರೀ ಬಜೆಟ್ ಸಿನಿಮಾ ಆಗಿದೆ. ಬಹುಕೋಟಿ ವೆಚ್ಚದಲ್ಲಿ, ಅದ್ದೂರಿ ತಾರಾಗಣದೊಂದಿಗೆ ನಿರ್ಮಾಣ ಆಗ್ತಿರೋ ಈ ಸಿನಿಮಾವನ್ನು ದಂಗಲ್ ಸಿನಿಮಾ ನಿರ್ದೇಶಕ ನಿತೇಶ್ ತಿವಾರಿ ನಿರ್ದೇಶನವನ್ನು ಮಾಡ್ತಿದ್ದಾರೆ.‌ ಈ ಸಿನಿಮಾ ಘೋಷಣೆ ಆದ ನಂತರ ಸಿನಿಮಾದಲ್ಲಿ ರಣಬೀರ್ ಕಪೂರ್ (Ranbir Kapoor) ರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿ ಮತ್ತು ರಾಕಿಂಗ್ ಸ್ಟಾರ್ ಯಶ್ (Actor Yash) ರಾವಣನಾಗಿ ನಟಿಸಲಿದ್ದಾರೆ ಅಂತ ಸಾಕಷ್ಟು ಸುದ್ದಿಗಳಾಗಿದೆ. ಯಶ್ ತಮ್ಮ ಪಾತ್ರಕ್ಕಾಗಿ ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಾರೆನ್ನುವ ಸುದ್ದಿಗಳು ಸಹಾ ವೈರಲ್ ಆಗಿದ್ದವು.

ಆದರೆ ಈಗ ಹೊಸ ಅಪ್ಡೇಟ್ ಗಳ ಪ್ರಕಾರ ನಟ ಯಶ್ ಅವರು ರಾವಣನ ಪಾತ್ರವನ್ನು ತಿರಸ್ಕರಿಸಿದ್ದಾರೆ ಎನ್ನುವ ಸುದ್ದಿಯೊಂದು ಎಲ್ಲರಿಗೂ ಸಹಾ ಅಚ್ಚರಿಯನ್ನು ಮೂಡಿಸಿದೆ. ಇದೇ ವೇಳೆ ಯಶ್ ಅವರು ಹೊಸ ನಿರ್ಧಾರವೊಂದನ್ನು ಸಹಾ ಮಾಡಿದ್ದಾರೆ ಎನ್ನುವುದು ವಿಶೇಷವಾಗಿದೆ. ಹೌದು, ರಾಕೀ ಬಾಯ್ ರಾಮಾಯಣ ಸಿನಿಮಾಕ್ಕೆ ನಟನಾಗಿ ಅಲ್ಲ, ನಿರ್ಮಾಪಕನಾಗಲು ಮುಂದಾಗಿದ್ದಾರೆ ಎನ್ನುವುದು ಎಲ್ಲರ ಗಮನವನ್ನು ಸೆಳೆದಿದೆ.

ರಾಕಿಂಗ್ ಸ್ಟಾರ್ ಯಶ್ ಅವರು ಈಗ ರಾಮಾಯಣ ಸಿನಿಮಾ ನಿರ್ಮಾಪಕ ನಮಿತ್ ಮಲ್ಹೋತ್ರಾ (Namith Malhotra) ಜೊತೆಗೆ ನಿರ್ಮಾಣಕ್ಕೆ ಕೈ ಜೋಡಿಸಿದ್ದಾರೆ. ಸಿನಿಮಾ ನಿರ್ಮಾಣದ ಕುರಿತಾಗಿ ಮಾತನಾಡಿರುವ ನಿರ್ಮಾಪಕ ನಮಿತ್ ಮಲ್ಹೋತ್ರಾ ಅವರು ರಾಮಾಯಣದಂತಹ ಅದ್ಭುತವಾದ ಕಥೆಗೆ ನ್ಯಾಯವನ್ನು ಒದಗಿಸಲು ನಾನು ಸಿದ್ಧವಾಗಿದ್ದೇನೆ. ನಮ್ಮ ಸಂಸ್ಕೃತಿಯನ್ನು ಇಡೀ ಜಗತ್ತಿಗೆ ಪರಿಚಯಿಸಬೇಕಾಗಿದೆ.

ಯಶ್ ಸಹಾ ನನ್ನ ಹಾಗೇ ಆಲೋಚನೆಯನ್ನು ಮಾಡಿದ್ದಾರೆ. ಅವರ ಪಯಣದಿಂದ ನಾನು ಸ್ಪೂರ್ತಿಯನ್ನು ಪಡೆದಿದ್ದೇನೆ. ಯಶ್ ಅವರಲ್ಲಿ ಇರುವಂತಹ ಯೋಜನೆಯನ್ನು ನಾನು ಅರಿತುಕೊಂಡಿದ್ದೇನೆ ಹಾಗೂ ರಾಮಾಯಣ ದೃಶ್ಯ ಕಾವ್ಯವನ್ನು ತೆರೆಗೆ ತರಲು ಸಿದ್ಧತೆಗಳನ್ನು ನಡೆಸಿದ್ದೇವೆ ಎನ್ನುವ ಮಾತುಗಳನ್ನು ಹೇಳಿದ್ದಾರೆ. ರಾಮಾಯಣ ಸಿನಿಮಾದ ಕುರಿತಾಗಿ ಈಗಾಗಲೇ ಸಾಕಷ್ಟು ನಿರೀಕ್ಷೆಗಳು ಮೂಡಿವೆ.

Soma Shekar

Recent Posts

Ninagagi Serial: ಹೊಸ ಸೀರಿಯಲ್ ಘೋಷಣೆ, ದಿವ್ಯ ಉರುಡುಗ ಎಂಟ್ರಿ, ಬೃಂದಾವನ ಸೀರಿಯಲ್ ಎಕ್ಸಿಟ್? ಪ್ರೇಕ್ಷಕರಿಗೆ ಟೆನ್ಷನ್

Ninagagi Serial: ಕನ್ನಡ ಸಿನಿಮಾ ಮತ್ತು ಕಿರುತೆರೆಯಲ್ಲಿ ಹೆಸರನ್ನು ಮಾಡಿರುವ ನಟಿಯರಲ್ಲಿ ದಿವ್ಯ ಉರುಡುಗ (Divya Uruduga) ಅವರು ಬಿಗ್…

14 hours ago

Chandini: ‘ಎ’ ನನ್ನ ಜೀವನ ಬದಲಿಸಿದ ಸಿನಿಮಾ: ರೀ ರಿಲೀಸ್ ವೇಳೆ ಎ ಸಿನಿಮಾ ನಟಿ ಚಾಂದಿನಿ ಮನಸ್ಸಿನ ಮಾತು

Chandini: ಕನ್ನಡ ಸಿನಿಮಾ ರಂಗದಲ್ಲಿ ಕೆಲವೊಂದು ಸಿನಿಮಾಗಳು ಎವರ್ ಗ್ರೀನ್ ಸಿನಿಮಾಗಳಾಗಿ ಜನರ ಮನಸ್ಸಿನಲ್ಲಿ ಸ್ಥಾನವನ್ನು ಪಡೆದಿದೆ. ಕೆಲವೊಂದು ಸಿನಿಮಾಗಳು…

15 hours ago

Tollywood Heroins: ಮೊದಲ ಸಿನಿಮಾದಿಂದಲೇ ಸ್ಟಾರ್ ಗಳಾದ ಈ ಇಬ್ಬರ ಅಬ್ಬರ ತಗ್ಗಿದ್ದೇಕೆ? ಚಾನ್ಸ್ ಸಿಕ್ತಿಲ್ಲ ಯಾಕೆ?

Tollywood Heroins: ಸಿನಿಮಾ ರಂಗದಲ್ಲಿ ಕೆಲವು ನಟ ನಟಿಯರಿಗೆ ಮೊದಲ ಸಿನಿಮಾದ ಮೂಲಕವೇ ದೊಡ್ಡ ಕ್ರೇಜ್ ಸೃಷ್ಟಿಯಾಗುತ್ತದೆ ಮತ್ತು ಒಂದೇ…

18 hours ago

Amruthadhaare: ಗೌತಮ್ ಭೂಮಿಕಾ ಹೊರಟ ಕೂಡಲೇ ತನ್ನ ಅಸಲಿ ಮುಖ ತೋರಿಸಿದ ಜೈದೇವ್; ಮಲ್ಲಿ ಕಥೆ ಮುಗೀತಾ?

Amruthadhaare : ಅಮೃತಧಾರೆ (Amruthadhaare) ಸೀರಿಯಲ್ ನಲ್ಲಿ ಗೌತಮ್ ಮತ್ತು ಭೂಮಿಕಾ ಖುಷಿಯಾಗಿ ಚಿಕ್ಕಮಗಳೂರಿನ ಕಡೆಗೆ ಹೊರಟಿದ್ದಾರೆ. ಅಲ್ಲಿನ ಪ್ರಕೃತಿ…

19 hours ago

Bhumika Ramesh: ಲಕ್ಷ್ಮೀ ಬಾರಮ್ಮ ಸೀರಿಯಲ್ ಗೆ ಗುಡ್ ಬೈ ಹೇಳ್ತಾರಾ ಭೂಮಿಕಾ; ತೆಲುಗಲ್ಲಿ ಹೊಸ ಆಫರ್

Bhumika Ramesh: ಇತ್ತೀಚಿನ ದಿನಗಳಲ್ಲಿ ತೆಲುಗು ಕಿರುತೆರೆಯಲ್ಲಿ (Telugu Television) ಕನ್ನಡ ಕಲಾವಿದ್ದರದ್ದೇ ಪಾರುಪತ್ಯ ಎನ್ನುವುದರಲ್ಲಿ ಎರಡು ಮಾತಿಲ್ಲ. ತೆಲುಗು…

20 hours ago

Lakshmi Nivasa: ಹುಚ್ಚು ಪ್ರೀತಿ, ಹೆಂಡ್ತಿ ಪರದಾಟಕ್ಕೆ ಖುಷಿ ಪಟ್ಟ ಜಯಂತ್; ಏನ್ ತಲೆನೋವು ಗುರು ಅಂದ್ರು ನೆಟ್ಟಿಗರು

Lakshmi Nivasa: ಸದ್ಯಕ್ಕಂತೂ ಲಕ್ಷ್ಮೀ ನಿವಾಸ (Lakshmi Nivasa) ಸೀರಿಯಲ್ ನಲ್ಲಿ ಜಯಂತ್ (Jayanth) ಮತ್ತು ಜಾಹ್ನವಿ (Jahnavi) ಕಥೆಯೇ…

22 hours ago

This website uses cookies.