Entertainment

Coolie Movie: ರಜನೀಕಾಂತ್ ಹೊಸ ಸಿನಿಮಾ ವಿರುದ್ಧ ನೋಟೀಸ್ ಜಾರಿ ಮಾಡಿದ ಇಳಯರಾಜ; ಸಂಗೀತ ನಿರ್ದೇಶಕನ ಸಿಟ್ಟಿಗೆ ಕಾರಣವೇನು?

Coolie Movie: ತಮಿಳಿನ ಜನಪ್ರಿಯ ನಿರ್ದೇಶಕ ಲೊಕೇಶ್ ಕನಗರಾನ್ (Lokesh Kanagaraj) ಮತ್ತು ಸೂಪರ್ ಸ್ಟಾರ್ ರಜನೀಕಾಂತ್ (Rajanikanth) ಕಾಂಬಿನೇಷನ್ ನಲ್ಲಿ ಮೂಡಿ ಬರಲಿರುವ ಸಿನಿಮಾ ʼಕೂಲಿʼ (Coolie Movie) ಘೋಷಣೆಯಾದ ನಂತರದಲ್ಲಿ ಬಹಳ ದೊಡ್ಡ ಮಟ್ಟದಲ್ಲಿ ನಿರೀಕ್ಷೆಗಳನ್ನು ಮೂಡಿಸಿದೆ. ಇತ್ತೀಚೆಗಷ್ಟೇ ಬಿಡುಗಡೆಯಾದ ಟೈಟಲ್ ಮತ್ತು ಟೀಸರ್ ನಿಂದ ಸಿನಿಮಾದ ಮೇಲಿನ ನಿರೀಕ್ಷೆಗಳು ದುಪ್ಪಟ್ಟಾಗಿದೆ. ಅಲ್ಲದೇ ರಜನೀಕಾಂತ್ ಈ ಸಿನಿಮಾಕ್ಕೆ ಪಡೆಯುತ್ತಿರುವ ಸಂಭಾವನೆಯ ವಿಚಾರ ವೈರಲ್ ಆಗಿದ್ದು, ನಟ ಏಷ್ಯಾದಲ್ಲೇ ಅತಿ ಹೆಚ್ಚು ಸಂಭಾವನೆ ಪಡೆಯುವ ನಟ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.

ʼಕೂಲಿʼ ಸಿನಿಮಾದ ಟೀಸರ್‌ ಅನ್ನು ನೋಡಿದ ನಂತರ ರಜನೀಕಾಂತ್ ಅಭಿಮಾನಿಗಳಂತೂ ಸಿಕ್ಕಾಪಟ್ಟೆ ಖುಷಿಯಾಗಿದ್ದಾರೆ. ಆದರೆ ಈಗ ಖುಷಿಯ ಬೆನ್ನಲ್ಲೇ ಚಿತ್ರತಂಡಕ್ಕೆ ಕಾಪಿ ರೈಟ್ಸ್ ಸಂಕಷ್ಟವು ಕಾಡಿದೆ. ಸಂಗೀತ ಲೋಕದ ದಿಗ್ಗಜರಾದ ಇಳಯರಾಜ ಅವರು ಕೂಲಿ ಸಿನಿಮಾ ತಂಡಕ್ಕೆ ಕಾಪಿ ರೈಟ್ಸ್ ನೋಟೀಸ್ ಅನ್ನು ನೀಡಿದ್ದಾರೆ. ಹಾಗಾದರೆ ಏನಿದು ವಿವಾದ ಅನ್ನೋದನ್ನ ತಿಳಿಯೋಣ ಬನ್ನಿ.

ಬಿಡುಗಡೆ ಆಗಿರುವ ʼಕೂಲಿʼ ಟೈಟಲ್‌ ಟೀಸರ್‌ ನಲ್ಲಿ ರಜನೀಕಾಂತ್ ಅವರು ನಟಿಸಿರುವಂತಹ  1983 ರಲ್ಲಿ ತೆರೆಕಂಡಿದ್ದಂತಹ ʼತಂಗ ಮಗನ್ʼ ಸಿನಿಮಾದ ಜನಪ್ರಿಯ ಹಾಡು ‘ವಾ ವಾ ಪಕ್ಕಂ ವಾ’ ಹಾಡನ್ನು ಬಳಸಿಕೊಂಡಿದ್ದಾರೆ. ಈ ಹಾಡನ್ನು ಅಂದು ಆ ಸಿನಿಮಾಕ್ಕಾಗಿ ಇಳಯರಾಜ (Ilayaraja) ಅವರು ಸಂಯೋಜನೆ ಮಾಡಿದ್ದರು. ಆದ್ದರಿಂದ ಕಾನೂನಿನ ಪ್ರಕಾರ ಇಳಯರಾಜ ಅವರು ಆ ಹಾಡಿನ ಮಾಲೀಕರಾಗಿರದ್ದಾರೆ.

ಈಗ ಕೂಲಿ ಸಿನಿಮಾ ಟೈಟಲ್ ಟೀಸರ್ ನ ಬಿಡುಗಡೆಗಾಗಿ, ಇಳಯರಾಜ ಅವರ ಅನುಮತಿಯನ್ನು ಪಡೆಯದೇ ಅವರ ಹಾಡನ್ನು ಬಳಸಿಕೊಂಡಿದ್ದಾರೆ. ಔಪಚಾರಿಕವಾಗಿ ಅವರಿಂದ ಅನಮತಿಯನ್ನು ಪಡೆಯುವ ಗೋಜಿಗೆ ಹೋಗಿಲ್ಲ. ಆದ್ದರಿಂದಲೇ ಈಗ 1957 ರ ಹಕ್ಕುಸ್ವಾಮ್ಯ ಕಾಯ್ದೆಯಡಿಯಲ್ಲಿ ಇದನ್ನು ಅಪರಾಧ ಎಂದು ಪರಿಗಣಿಲಾಗಿದೆ. ಇದೇ ಕಾರಣದಿಂದ ಲೀಗಲ್ ನೋಟಿಸ್‌ ಜಾರಿಯಾಗಿದೆ.

Soma Shekar

Recent Posts

Kangana Ranaut: ಎಮೆರ್ಜೆನ್ಸಿ ಸಿನಿಮಾಕ್ಕಾಗಿ ಕಾಯ್ತಿದ್ದ ಫ್ಯಾನ್ಸ್ ಗೆ ದೊಡ್ಡ ಶಾಕ್ ಕೊಟ್ಟ ಕಂಗನಾ ರಣಾವತ್

Kangana Ranaut: ಬಾಲಿವುಡ್ ನಟಿ ಕಂಗನಾ ರಣಾವತ್ (Kangana Ranaut) ಸದ್ಯಕ್ಕೆ ರಾಜಕೀಯದ ವಿಚಾರವಾಗಿ ಭರ್ಜರಿ ಸುದ್ದಿಯಲ್ಲಿದ್ದಾರೆ. ಮೊನ್ನೆಯಷ್ಟೇ ನಟಿ…

2 hours ago

SeethaRama: ಭಾರ್ಗವಿಯ ಕುತಂತ್ರಕ್ಕೆ ಬಲಿಯಾದ ಅಶೋಕ; ಪ್ರಜ್ಞೆ ತಪ್ಪಿದ ಅಶೋಕನ ರಕ್ಷಣೆಗೆ ಯಾರು ಬರ್ತಾರೆ?

SeethaRama : ಸೀತಾಳ ಮನೆಗೆ ದೇಸಾಯಿ ಕುಟುಂಬದವರೆಲ್ಲರೂ ಆಗಮಿಸಿದ್ದಾರೆ. ಶಾಸ್ತ್ರೋಕ್ತವಾಗಿ ಹೆಣ್ಣನ್ನು ಕೇಳುವ ಶಾಸ್ತ್ರವನ್ನು ಬಹಳ ಖುಷಿಯಿಂದ ಮಾಡುತ್ತಿದ್ದಾರೆ ಸೂರ್ಯ…

4 hours ago

Ninagagi Serial: ಹೊಸ ಸೀರಿಯಲ್ ಘೋಷಣೆ, ದಿವ್ಯ ಉರುಡುಗ ಎಂಟ್ರಿ, ಬೃಂದಾವನ ಸೀರಿಯಲ್ ಎಕ್ಸಿಟ್? ಪ್ರೇಕ್ಷಕರಿಗೆ ಟೆನ್ಷನ್

Ninagagi Serial: ಕನ್ನಡ ಸಿನಿಮಾ ಮತ್ತು ಕಿರುತೆರೆಯಲ್ಲಿ ಹೆಸರನ್ನು ಮಾಡಿರುವ ನಟಿಯರಲ್ಲಿ ದಿವ್ಯ ಉರುಡುಗ (Divya Uruduga) ಅವರು ಬಿಗ್…

22 hours ago

Chandini: ‘ಎ’ ನನ್ನ ಜೀವನ ಬದಲಿಸಿದ ಸಿನಿಮಾ: ರೀ ರಿಲೀಸ್ ವೇಳೆ ಎ ಸಿನಿಮಾ ನಟಿ ಚಾಂದಿನಿ ಮನಸ್ಸಿನ ಮಾತು

Chandini: ಕನ್ನಡ ಸಿನಿಮಾ ರಂಗದಲ್ಲಿ ಕೆಲವೊಂದು ಸಿನಿಮಾಗಳು ಎವರ್ ಗ್ರೀನ್ ಸಿನಿಮಾಗಳಾಗಿ ಜನರ ಮನಸ್ಸಿನಲ್ಲಿ ಸ್ಥಾನವನ್ನು ಪಡೆದಿದೆ. ಕೆಲವೊಂದು ಸಿನಿಮಾಗಳು…

24 hours ago

Tollywood Heroins: ಮೊದಲ ಸಿನಿಮಾದಿಂದಲೇ ಸ್ಟಾರ್ ಗಳಾದ ಈ ಇಬ್ಬರ ಅಬ್ಬರ ತಗ್ಗಿದ್ದೇಕೆ? ಚಾನ್ಸ್ ಸಿಕ್ತಿಲ್ಲ ಯಾಕೆ?

Tollywood Heroins: ಸಿನಿಮಾ ರಂಗದಲ್ಲಿ ಕೆಲವು ನಟ ನಟಿಯರಿಗೆ ಮೊದಲ ಸಿನಿಮಾದ ಮೂಲಕವೇ ದೊಡ್ಡ ಕ್ರೇಜ್ ಸೃಷ್ಟಿಯಾಗುತ್ತದೆ ಮತ್ತು ಒಂದೇ…

1 day ago

Amruthadhaare: ಗೌತಮ್ ಭೂಮಿಕಾ ಹೊರಟ ಕೂಡಲೇ ತನ್ನ ಅಸಲಿ ಮುಖ ತೋರಿಸಿದ ಜೈದೇವ್; ಮಲ್ಲಿ ಕಥೆ ಮುಗೀತಾ?

Amruthadhaare : ಅಮೃತಧಾರೆ (Amruthadhaare) ಸೀರಿಯಲ್ ನಲ್ಲಿ ಗೌತಮ್ ಮತ್ತು ಭೂಮಿಕಾ ಖುಷಿಯಾಗಿ ಚಿಕ್ಕಮಗಳೂರಿನ ಕಡೆಗೆ ಹೊರಟಿದ್ದಾರೆ. ಅಲ್ಲಿನ ಪ್ರಕೃತಿ…

1 day ago

This website uses cookies.