Actor Darshan: ಸ್ಯಾಂಡಲ್ವುಡ್ ಗೆ ಶಾಕ್, ಚಾಲೆಂಜಿಂಗ್ ಸ್ಟಾರ್ ದರ್ಶನ್ ಪೋಲಿಸರ ವಶಕ್ಕೆ

Written by Soma Shekar

Published on:

---Join Our Channel---

Actor Darshan: ಕೊ ಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ (Actor Darshan) ಅವರನ್ನು ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಮೈಸೂರಿನ (Mysore) ಫಾರ್ಮ್ ಹೌಸ್ ನಲ್ಲಿ ಇಂದು ಬೆಳಗಿನ ಜಾವ ಕಾಮಾಕ್ಷಿಪಾಳ್ಯದ ಪೊಲೀಸರು ನಟ ದರ್ಶನ್ ಅವರನ್ನು ವಶಕ್ಕೆ ಪಡೆದಿದ್ದಾರೆನ್ನುವ ಮಾಹಿತಿಯು ಈಗ ಮಾಧ್ಯಮಗಳಲ್ಲಿ ಪ್ರಮುಖ ಸುದ್ದಿಯಾಗಿದೆ. ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ದರ್ಶನ್ ಅವರನ್ನು ವಶಕ್ಕೆ ಪಡೆದುಕೊಂಡಿರುವ ಕುರಿತಾಗಿ ಪೊಲೀಸ್ ಆಯುಕ್ತ ದಯಾನಂದ್ ಅವರು ಮಾದ್ಯಮವೊಂದಕ್ಕೆ ಸ್ಪಷ್ಟನೆಯನ್ನು ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ (Renuka Swamy) ಎನ್ನುವವರ ಕೊ ಲೆ ಯ ಕೇಸ್ ನಲ್ಲಿ ನಟನನ್ನು ವಶಕ್ಕೆ ಪಡೆಯಲಾಗಿದ್ದು ಅವರನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಎರಡು ದಿನಗಳ ಹಿಂದೆ ಸುಮ್ಮನಹಳ್ಳಿ ಬ್ರಿಡ್ಜ್ ಬಳಿಯಲ್ಲಿ ಅಪರಿಚಿತ ಮೃತ ದೇಹ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈಗ ಇದೇ ಪ್ರಕರಣದ ವಿಚಾರವಾಗಿ ಪೊಲೀಸರು ದರ್ಶನ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಸ್ವಲ್ಪ ಹೊತ್ತಿನಲ್ಲೇ ಈ ಪ್ರಕರಣಕ್ಕೆ ಸಂಬಂಧಪಟ್ಟ ಹಾಗೆ ನಗರ ಪೊಲೀಸ್ ಆಯುಕ್ತ ದಯಾನಂದ್ ಅವರು ಸುದ್ದಿಗೋಷ್ಠಿ ಒಂದನ್ನು ನಡೆಸಲಿದ್ದಾರೆ. ಬೆಂಗಳೂರಿನಲ್ಲಿ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯವರ ಹ ತ್ಯೆ ನಡೆದಿದ್ದು, ಇವರು ಚಿತ್ರದುರ್ಗದ ಲಕ್ಷ್ಮಿ ವೆಂಕಟೇಶ್ವರ ಬಡಾವಣೆಯ ನಿವಾಸಿಯಾಗಿದ್ದು, ಅಪೋಲೋ ಮೆಡಿಕಲ್ ನಲ್ಲಿ ಉದ್ಯೋಗ ನಿರ್ವಹಣೆ ಮಾಡುತ್ತಿದ್ದರು. ಶನಿವಾರ ಮನೆಯಿಂದ ಹೊರಟವರು ಮರಳಿ ಬಂದಿರಲಿಲ್ಲ.

ನಿನ್ನೆ ಬೆಂಗಳೂರು ಪೊಲೀಸರು ರೇಣುಕಾ ಸ್ವಾಮಿ ಶವವಾಗಿ ಪತ್ತೆಯಾಗಿರುವ ಮಾಹಿತಿಯನ್ನು ಅವರ ಕುಟುಂಬದ ಜೊತೆಗೆ ಹಂಚಿಕೊಂಡಿದ್ದಾರೆ. ಈಗ ಈ ಪ್ರಕರಣದ ವಿಚಾರವಾಗಿ ಸ್ಯಾಂಡಲ್ ವುಡ್ ನ ಸ್ಟಾರ್ ನಟ ದರ್ಶನ್ ಅವರನ್ನು ಪೊಲೀಸರು ತಮ್ಮ ವಶಕ್ಕೆ ಪಡೆದಿರುವುದು ಸಂಚಲನ ಸೃಷ್ಟಿಸಿದೆ. ಸೋಶಿಯಲ್ ಮೀಡಿಯಾಗಳಲ್ಲಿ ಈಗಾಗಲೇ ಈ ವಿಚಾರವಾಗಿ ಸುದ್ದಿಗಳು ಹರಿದಾಡಿದ್ದು ಒಂದಷ್ಟು ಚರ್ಚೆಗಳಿಗೆ ಕಾರಣವಾಗಿದೆ.

Leave a Comment