News

Prakash Raj: ಮೋದಿಯನ್ನು ಮೂರು ಬಿಟ್ಟ ಮಹಾಪ್ರಭು ಎನ್ನುತ್ತಾ ಐದು ಪ್ರಶ್ನೆ ಕೇಳಿದ ಪ್ರಕಾಶ್ ರಾಜ್; ಏನದು ಪ್ರಶ್ನೆಗಳು?

Prakash Raj : ನಟ ಪ್ರಕಾಶ್ ರಾಜ್ (Prakash Raj) ಅವರು ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು (Narendra Modi) ಟೀಕಿಸುವುದು ಸಾಮಾನ್ಯವಾದ ವಿಚಾರವಾಗಿದೆ. ಆದರೆ ಈಗ ಚುನಾವಣೆಗಳ ಸಮಯದಲ್ಲಿ ಪ್ರಕಾಶ್ ರಾಜ್ ಅವರ ಮಾತಿನ ಧಾಟಿ ಇನ್ನಷ್ಟು ಬಿರುಸಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಮತ್ತಷ್ಟು ಚುರುಕಾಗಿ ಅವರು ಪ್ರಶ್ನೆಗಳನ್ನು ಕೇಳುತ್ತಿದ್ದಾರೆ, ಕೇಂದ್ರ ಸರ್ಕಾರ ಮತ್ತು ಮೋದಿ ಕುರಿತಾಗಿ ಅಸಮಾಧಾನವನ್ನು ಹೊರ ಹಾಕುತ್ತಿದ್ದಾರೆ. ಈಗ ಅವರು ಪ್ರಧಾ‌ನಿಯನ್ನ ಮೂರು ಬಿಟ್ಟ ಪ್ರಭು ಎಂದು ಟೀಕಿಸುತ್ತಾ, ಐದು ಪ್ರಶ್ನೆಗಳನ್ನು ಕೇಳಿದ್ದಾರೆ.

ಪ್ರಕಾಶ್ ರಾಜ್ ಅವರು ಪ್ರಧಾ‌ನಿ ನರೇಂದ್ರ ಮೋದಿ ಅವರ ಇತ್ತೀಚಿನ ಮಂಗಳ ಸೂತ್ರದ ಹೇಳಿಕೆಯ ಕುರಿತಾಗಿ ಸ್ವಲ್ಪ ಖಾರವಾಗಿಯೇ ತಮ್ಮ ಪ್ರತಿಕ್ರಿಯೆಯನ್ನು ನೀಡಿದ್ದು, ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಅವರು ಐದು ಪ್ರಶ್ನೆಗಳನ್ನು ಬರೆದುಕೊಂಡಿದ್ದು, ಪ್ರಧಾನಿಗೆ ಅವರು ಈ ಐದು ಪ್ರಶ್ನೆಗಳನ್ನು ಕೇಳಿರುವುದು ಸ್ಪಷ್ಟವಾಗಿದೆ. ಪ್ರಕಾಶ್ ರಾಜ್ ಅವರ ಈ ಪೋಸ್ಟ್ ಈಗ ವೈರಲ್ ಆಗಿದೆ. ನಟ ತಮ್ಮ ಪೋಸ್ಟ್ ನಲ್ಲಿ ಕೇಳಿರುವ ಐದು ಪ್ರಶ್ನೆಗಳು ಹೀಗಿವೆ.

ಮೂರೂ ಬಿಟ್ಟ ಮಹಾಪ್ರಭುಗಳ ಕೆಂಗಣ್ಣು ಮಂಗಳಸೂತ್ರದ ಮೇಲೆ ಬಿದ್ದಿದೆ, ಆಯ್ತು ಮಂಗಳಸೂತ್ರದ ಬಗ್ಗೆಯೇ ಮಾತಾಡೋಣ.
ಪುಲ್ವಾಮಾದ 40 ಸೈನಿಕರ ಮಡದಿಯರ ಮಂಗಳಸೂತ್ರ ಕಿತ್ತವರು ಯಾರು?
ದೆಹಲಿ ಗಡಿಯಲ್ಲಿ ಪ್ರತಿಭಟನಾ ನಿರತ ನೂರಾರು ರೈತರ ಸಾವಾಯ್ತಲ್ಲ, ಆ ಮನೆಗಳ ಮಂಗಳಸೂತ್ರ ಕಿತ್ತವರು ಯಾರು?

ಲಾಕ್’ಡೌನ್ ಮಹಾವಲಸೆಯಲ್ಲಿ ರಸ್ತೆಯಲ್ಲೇ ಪ್ರಾಣ ಬಿಟ್ಟ ಲೆಕ್ಕವಿಕ್ಕದಷ್ಟು ಕಾರ್ಮಿಕರ ಪತ್ನಿಯರ ಮಂಗಳಸೂತ್ರ ಕಿತ್ತವರು ಯಾರು?
ನೋಟ್ ಬ್ಯಾನ್ ನಿಂದ ATM ಕ್ಯೂನಲ್ಲೇ ಪ್ರಾಣ ಕಳೆದುಕೊಂಡ ಮನೆಗಳ ಮಂಗಳಸೂತ್ರ ಕಿತ್ತವರು ಯಾರು? ಮಣಿಪುರದ ಗಲಭೆಯಲ್ಲಿ ಹತ್ಯೆಯಾದ ಮನೆಗಳ ಮಂಗಳಸೂತ್ರ ಕಿತ್ತವರು ಯಾರು ? ಎಂದು ಐದು ಪ್ರಶ್ನೆಗಳನ್ನು ಕೇಳಿದ್ದಾರೆ.‌

Soma Shekar

Recent Posts

Ninagagi Serial: ಹೊಸ ಸೀರಿಯಲ್ ಘೋಷಣೆ, ದಿವ್ಯ ಉರುಡುಗ ಎಂಟ್ರಿ, ಬೃಂದಾವನ ಸೀರಿಯಲ್ ಎಕ್ಸಿಟ್? ಪ್ರೇಕ್ಷಕರಿಗೆ ಟೆನ್ಷನ್

Ninagagi Serial: ಕನ್ನಡ ಸಿನಿಮಾ ಮತ್ತು ಕಿರುತೆರೆಯಲ್ಲಿ ಹೆಸರನ್ನು ಮಾಡಿರುವ ನಟಿಯರಲ್ಲಿ ದಿವ್ಯ ಉರುಡುಗ (Divya Uruduga) ಅವರು ಬಿಗ್…

16 hours ago

Chandini: ‘ಎ’ ನನ್ನ ಜೀವನ ಬದಲಿಸಿದ ಸಿನಿಮಾ: ರೀ ರಿಲೀಸ್ ವೇಳೆ ಎ ಸಿನಿಮಾ ನಟಿ ಚಾಂದಿನಿ ಮನಸ್ಸಿನ ಮಾತು

Chandini: ಕನ್ನಡ ಸಿನಿಮಾ ರಂಗದಲ್ಲಿ ಕೆಲವೊಂದು ಸಿನಿಮಾಗಳು ಎವರ್ ಗ್ರೀನ್ ಸಿನಿಮಾಗಳಾಗಿ ಜನರ ಮನಸ್ಸಿನಲ್ಲಿ ಸ್ಥಾನವನ್ನು ಪಡೆದಿದೆ. ಕೆಲವೊಂದು ಸಿನಿಮಾಗಳು…

17 hours ago

Tollywood Heroins: ಮೊದಲ ಸಿನಿಮಾದಿಂದಲೇ ಸ್ಟಾರ್ ಗಳಾದ ಈ ಇಬ್ಬರ ಅಬ್ಬರ ತಗ್ಗಿದ್ದೇಕೆ? ಚಾನ್ಸ್ ಸಿಕ್ತಿಲ್ಲ ಯಾಕೆ?

Tollywood Heroins: ಸಿನಿಮಾ ರಂಗದಲ್ಲಿ ಕೆಲವು ನಟ ನಟಿಯರಿಗೆ ಮೊದಲ ಸಿನಿಮಾದ ಮೂಲಕವೇ ದೊಡ್ಡ ಕ್ರೇಜ್ ಸೃಷ್ಟಿಯಾಗುತ್ತದೆ ಮತ್ತು ಒಂದೇ…

20 hours ago

Amruthadhaare: ಗೌತಮ್ ಭೂಮಿಕಾ ಹೊರಟ ಕೂಡಲೇ ತನ್ನ ಅಸಲಿ ಮುಖ ತೋರಿಸಿದ ಜೈದೇವ್; ಮಲ್ಲಿ ಕಥೆ ಮುಗೀತಾ?

Amruthadhaare : ಅಮೃತಧಾರೆ (Amruthadhaare) ಸೀರಿಯಲ್ ನಲ್ಲಿ ಗೌತಮ್ ಮತ್ತು ಭೂಮಿಕಾ ಖುಷಿಯಾಗಿ ಚಿಕ್ಕಮಗಳೂರಿನ ಕಡೆಗೆ ಹೊರಟಿದ್ದಾರೆ. ಅಲ್ಲಿನ ಪ್ರಕೃತಿ…

21 hours ago

Bhumika Ramesh: ಲಕ್ಷ್ಮೀ ಬಾರಮ್ಮ ಸೀರಿಯಲ್ ಗೆ ಗುಡ್ ಬೈ ಹೇಳ್ತಾರಾ ಭೂಮಿಕಾ; ತೆಲುಗಲ್ಲಿ ಹೊಸ ಆಫರ್

Bhumika Ramesh: ಇತ್ತೀಚಿನ ದಿನಗಳಲ್ಲಿ ತೆಲುಗು ಕಿರುತೆರೆಯಲ್ಲಿ (Telugu Television) ಕನ್ನಡ ಕಲಾವಿದ್ದರದ್ದೇ ಪಾರುಪತ್ಯ ಎನ್ನುವುದರಲ್ಲಿ ಎರಡು ಮಾತಿಲ್ಲ. ತೆಲುಗು…

22 hours ago

Lakshmi Nivasa: ಹುಚ್ಚು ಪ್ರೀತಿ, ಹೆಂಡ್ತಿ ಪರದಾಟಕ್ಕೆ ಖುಷಿ ಪಟ್ಟ ಜಯಂತ್; ಏನ್ ತಲೆನೋವು ಗುರು ಅಂದ್ರು ನೆಟ್ಟಿಗರು

Lakshmi Nivasa: ಸದ್ಯಕ್ಕಂತೂ ಲಕ್ಷ್ಮೀ ನಿವಾಸ (Lakshmi Nivasa) ಸೀರಿಯಲ್ ನಲ್ಲಿ ಜಯಂತ್ (Jayanth) ಮತ್ತು ಜಾಹ್ನವಿ (Jahnavi) ಕಥೆಯೇ…

1 day ago

This website uses cookies.