Entertainment

South Actress: ದಳಪತಿ ವಿಜಯ್ ಎದುರು ರಾಜಕೀಯದಲ್ಲಿ ತೊಡೆ ತಟ್ಟಲು ಸಜ್ಜಾದ ಸ್ಟಾರ್ ನಟಿ; ವಿಜಯ್ ಗೆ ಸವಾಲ್

South Actress: ಸಿನಿಮಾರಂಗದಲ್ಲಿ ಹೆಸರನ್ನು ಮಾಡಿರುವ, ದೊಡ್ಡ ಅಭಿಮಾನಿಗಳ ಬಳಗವನ್ನು ಪಡೆದುಕೊಂಡಿರುವ ಸ್ಟಾರ್ ನಟರು ರಾಜಕೀಯವನ್ನು ಪ್ರವೇಶಿಸುವುದು ಖಂಡಿತ ಹೊಸ ವಿಚಾರವೇನಲ್ಲ. ತಮಿಳು ನಾಡಿನ ರಾಜಕೀಯವನ್ನು ಗಮನಿಸಿದಾಗ ಈಗಾಗಲೇ ನಟರಾಗಿ ಹೆಸರನ್ನು ಮಾಡಿರುವ ಹಿರಿಯ ನಟ ಕಮಲ ಹಾಸನ್ (Kamal Haasan) ಮತ್ತು ಉದಯನಿಧಿ ಸ್ಟಾಲಿನ್ (Udayanidhi Stalin) ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ಇನ್ನು ಕೆಲವೇ ದಿನಗಳ ಹಿಂದೆಯಷ್ಟೇ ತಮಿಳಿನ ಸ್ಟಾರ್ ನಟ ದಳಪತಿ ವಿಜಯ್ ಕೂಡಾ ತಮಿಳುನಾಡಿನ ರಾಜಕೀಯಕ್ಕೆ ಭರ್ಜರಿಯಾಗಿ ಎಂಟ್ರಿಯನ್ನು ಕೊಟ್ಟಿದ್ದಾರೆ. ತಮಿಳಗ ವೆಟ್ರಿ ಕಳಗಂ ಎನ್ನುವ ಹೆಸರಿನ ತಮ್ಮದೇ ಆದ ಪಕ್ಷವನ್ನು ಪ್ರಾರಂಭ ಮಾಡಿದ್ದಾರೆ.

2024ರ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಈಗಾಗಲೇ ತಿಳಿಸಿರುವ ದಳಪತಿ ವಿಜಯ್ (Thalapathy Vijay), 2026ರಲ್ಲಿ ನಡೆಯಲಿರುವಂತಹ ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ತಾನು ಸ್ಪರ್ಧಿಸುವುದಾಗಿ ಹೇಳಿದ್ದಾರೆ. ತಮಿಳುನಾಡಿನಲ್ಲಿ ವಿಜಯ್ ರಾಜಕೀಯ ಪ್ರವೇಶ ಒಂದು ದೊಡ್ಡ ಸಂಚಲನವನ್ನೇ ಸೃಷ್ಟಿಸಿದೆ, ರಾಜಕೀಯ ಚಟುವಟಿಕೆಗಳು ಬಹಳ ಜೋರಾಗಿ ನಡೆದಿದೆ. ಇವೆಲ್ಲವುಗಳ ನಡುವೆ ಸ್ಟಾರ್ ನಟಿಯೊಬ್ಬರು ವಿಜಯ್ ಗೆ ಸ್ಪರ್ಧ ನೀಡಲು ನಿರ್ಧರಿಸಿರುವುದಾಗಿ ಹೇಳಿದ್ದಾರೆ.

ಹೌದು, ದಕ್ಷಿಣದ ಸಿನಿಮಾಗಳಲ್ಲಿ ನಟಿಸುವ ಮೂಲಕ ಜನಪ್ರಿಯತೆಯನ್ನು ಪಡೆದುಕೊಂಡಿರುವ ನಮಿತಾ (Namitha) ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ. ಇದೀಗ ಈ ನಟಿ ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಟಾರ್ ಹೀರೋ ದಳಪತಿ ವಿಜಯ್ ವಿರುದ್ಧ ತಾನು ಚುನಾವಣಾ ಕಣಕ್ಕೆ ಇಳಿಯುವುದಾಗಿ ಕಾಮೆಂಟ್ ಅನ್ನು ಮಾಡಿದ್ದಾರೆ. ನಟಿಯು ಹೇಳಿರುವಂತಹ ವಿಚಾರಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಗಮನವನ್ನು ಸೆಳೆದಿದೆ.

ನಮಿತಾ ಮಾಡಿರುವಂತಹ ಕಾಮೆಂಟ್ ವೈರಲ್ ಆದ ಬೆನ್ನಲ್ಲೇ ಅದಕ್ಕೆ ಸಾಕಷ್ಟು ಪ್ರತಿಕ್ರಿಯೆಗಳು ಕೂಡಾ ಹರಿದು ಬರುತ್ತಿದೆ. ರಾಜಕೀಯದಲ್ಲಿ ಪ್ರಬಲ ಎದುರಾಳಿಯ ವಿರುದ್ಧ ನಿಂತರೆ ಮಾತ್ರವೇ ರಾಜಕೀಯದಲ್ಲಿ ಬೇಗ ಬೆಳೆಯಬಹುದು ಅನ್ನೋದು ನಮಿತಾ ಅವರ ಆಲೋಚನೆ ಎನ್ನಲಾಗಿದೆ. ಅದಕ್ಕಾಗಿ ಅವರು ದಳಪತಿ ವಿಜಯ್ ವಿರುದ್ಧ ಚುನಾವಣಾ ಕಣದಲ್ಲಿ ತೊಡೆ ತಟ್ಟಲು ಸಜ್ಜಾಗುತ್ತಿದ್ದಾರೆ. ನಟಿಯ ಕಾಮೆಂಟ್ಗಳಿಗೆ ವಿಜಯ್ ಅಭಿಮಾನಿಗಳು ಪ್ರತಿಕ್ರಿಯೆ ನೀಡುತ್ತಾ ಟೀಕೆ ಮಾಡಿದ್ದು, ದಳಪತಿ ವಿರುದ್ಧ ಸ್ಪರ್ಧೆ ಮಾಡಿದರೆ ಠೇವಣಿ ಕೂಡಾ ಸಿಗೋದಿಲ್ಲ ಎಂದು ವ್ಯಂಗ್ಯ ಮಾಡುತ್ತಿದ್ದಾರೆ.

Soma Shekar

Recent Posts

Kiara Advani: ಕಾನ್ ಸಿನಿಮೋತ್ಸವದಲ್ಲಿ ಅಂದದ ಕಿಚ್ಚು ಹೊತ್ತಿಸಿದ ಕಿಯಾರಾ ಸೌಂದರ್ಯಕ್ಕೆ ಫ್ಯಾನ್ಸ್ ಫಿದಾ

Kiara Advani: ಕಾನ್ (Cannes 2024) ಸಿನಿಮಾ ಉತ್ಸವ ಬಂತೆಂದರೆ ಅಲ್ಲಿ ವಿಶ್ವದ ಸಿನಿಮಾ ತಾರೆಯರ ಚಿತ್ರ ವಿಚಿತ್ರ ಹಾಗೂ…

13 hours ago

Pavithra Jayram: ಪವಿತ್ರ ಕರೀತಿದ್ದಾಳೆ ಅಂತ ಹೆಂಡ್ತಿ ಮಕ್ಕಳನ್ನ ಮರೆತು ಸಾವಿಗೆ ಶರಣಾದ ಚಂದು

Pavithra Jayaram: ತ್ರಿನಯನಿ (Trinayani) ತೆಲುಗು ಸೀರಿಯಲ್ ಮೂಲಕ ಸಾಕಷ್ಟು ಜನಪ್ರಿಯತೆಯನ್ನು ಪಡೆದುಕೊಂಡಿದ್ದ ನಟಿ ಪವಿತ್ರಾ ಜಯರಾಂ (Pavithra Jayaram)…

15 hours ago

Brundavana Serial: ಬೃಂದಾವನ ಸೀರಿಯಲ್ ಪ್ರೇಕ್ಷಕರಿಗೆ ಬ್ಯಾಡ್ ನ್ಯೂಸ್; ಇದನ್ನ ಯಾರೂ ನಿರೀಕ್ಷೆ ಮಾಡಿರ್ಲಿಲ್ಲ

Brundavana Serial: ಕನ್ನಡ ಕಿರುತೆರೆಯಲ್ಲಿ ಬೃಂದಾವನ ಸೀರಿಯಲ್ (Brundavana Serial) ತನ್ನದೇ ಆದ ಒಂದು ಸ್ಥಾನವನ್ನು ಪಡೆದುಕೊಂಡು ಜನಪ್ರಿಯತೆಯನ್ನು ಪಡೆದುಕೊಂಡಿದೆ.…

21 hours ago

Sai Pallavi: ಮಾಡಲ್ಲ, ಮಾಡಲ್ಲ ಅಂತಾನೇ ಗ್ರೀನ್ ಸಿಗ್ನಲ್ ಕೊಟ್ಟಿದ್ಯಾಕೆ? ಶಾಕ್ ನಲ್ಲಿ ಸಾಯಿಪಲ್ಲವಿ ಫ್ಯಾನ್ಸ್

Sai Pallavi: ದಕ್ಷಿಣ ಸಿನಿಮಾ ರಂಗದ ಸ್ಟಾರ್ ನಟಿ ಸಾಯಿ ಪಲ್ಲವಿ (Sai Pallavi) ಈಗ ಪ್ಯಾನ್ ಇಂಡಿಯಾ ಸ್ಟಾರ್…

22 hours ago

Rashmika Mandanna: ಅಟಲ್ ಸೇತುವನ್ನು ಹೊಗಳಿದ ರಶ್ಮಿಕಾ ಮೇಲೆ ಸಿಡಿದೆದ್ದ ಕೇರಳ ಕಾಂಗ್ರೆಸ್ ಘಟಕ

Rashmika Mandanna: ಸೌತ್ ಬ್ಯೂಟಿ ರಶ್ಮಿಕಾ (Rashmika Mandanna) ಮತ್ತೊಮ್ಮೆ ಸಿಕ್ಕಾಪಟ್ಟೆ ಸುದ್ದಿಯಾಗಿದ್ದಾರೆ. ಈ ಬಾರಿ ನಟಿ ಯಾವುದೇ ಸಿನಿಮಾದ…

1 day ago

Prabhas: ಅವರಿಬ್ಬರು ಸಲಿಂಗಕಾಮಿಗಳು, ಲಂಡನ್ ನಲ್ಲಿ ನನ್ನ ಗಂಡನ ಜೊತೆ, ಸುಚಿತ್ರಾ ಶಾಕಿಂಗ್ ಹೇಳಿಕೆ

Suchithra : ಗಾಯಕಿ ಸುಚಿತ್ರಾ ರಾಮದುರೈ (Suchithra) ಅವರು ಮೊನ್ನೆ ಮೊನ್ನೆಯಷ್ಟೇ ತಮ್ಮ ಮಾಜಿ ಪತಿ ತಮಿಳು ನಟ ಕಾರ್ತಿಕ್…

2 days ago

This website uses cookies.