Entertainment

Actor Yash: ಬಾಲಿವುಡ್ ನ ಪ್ರತಿಷ್ಠಿತ ಸಿನಿಮಾದ ಸೀಕ್ವೆಲ್; ಯಶ್, ಅಲ್ಲು ಅರ್ಜುನ್ ಯಾರಾಗ್ತಾರೆ ಹೀರೋ ?

Actor Yash : ಕೆಜಿಎಫ್ (KGF) ಸರಣಿ ಸಿನಿಮಾಗಳ ದೊಡ್ಡ ಯಶಸ್ಸಿನ ನಂತರ ರಾಕಿಂಗ್ ಸ್ಟಾರ್ ಯಶ್ (Actor Yash) ಅವರ ಬೇಡಿಕೆ, ಜನಪ್ರಿಯತೆ ಮತ್ತು ಸ್ಟಾರ್ ಡಂ ಎಲ್ಲವೂ ಹೆಚ್ಚಿದೆ. ಬಾಲಿವುಡ್ ನಿಂದ ಸಾಕಷ್ಟು ಆಫರ್ ಗಳು ಅವರನ್ನು ಹುಡುಕಿ ಬರುತ್ತಿವೆ. ಯಶ್ ಈಗಾಗಲೇ ರಾಮಾಯಣ ಸಿನಿಮಾದಲ್ಲಿ ನಟಿಸ್ತಾರೆ, ಸಿನಿಮಾ ನಿರ್ಮಾಣದಲ್ಲೂ ಸಹಾ ತೊಡಗಿಸಿಕೊಂಡಿದ್ದಾರೆ ಎಂದು ಸುದ್ದಿಗಳಾಗಿದೆ.‌ ಈಗ ಅದರ ಬೆನ್ನಲ್ಲೇ ಬಾಲಿವುಡ್ ನಿಂದ ಮತ್ತೊಂದು ಹೊಸ ಆಫರ್ ಯಶ್ ಅವರನ್ನು ಅರಸಿ ಬಂದಿದೆ ಎನ್ನುವ ಸುದ್ದಿ ಕೇಳಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ.

ಯಶ್ ಅವರನ್ನು ಹುಡುಕಿ ಬಂದಿರುವ ಈ ಹೊಸ ಅವಕಾಶಕ್ಕೆ ನಟ ಗ್ರೀನ್ ಸಿಗ್ನಲ್ ಕೊಡ್ತಾರೋ ಇಲ್ವೋ ಅನ್ನೋದಂತೂ ಸದ್ಯಕ್ಕೆ ಕುತೂಹಲವನ್ನು ಮೂಡಿಸಿದೆ. ಅಭಿಮಾನಿಗಳು ಸಹಾ ನಟನ ನಿರ್ಧಾರ ತಿಳಿಯುವ ನಿರೀಕ್ಷೆಯಲ್ಲಿದ್ದಾರೆ. ಬಾಲಿವುಡ್ ನಲ್ಲಿ ಸಂಜಯ್ ದತ್, ಮಾಧುರಿ ದೀಕ್ಷಿತ್, ಜಾಕೀಶ್ರಾಫ್ ನಟಿಸಿ, ಸುಭಾಷ್ ಘಾಯ್ ನಿರ್ದೇಶನ ಮಾಡಿದ್ದ ಖಳ್ ನಾಯಕ್ (Khalnayak) ಸಿನಿಮಾ ತೊಂಬತ್ತರ ದಶಕದಲ್ಲಿ ದೊಡ್ಡ ಸದ್ದನ್ನು ಮಾಡಿದ್ದ ಸಿನಿಮಾ ಆಗಿತ್ತು.

ಈಗ ಆ ಸಿನಿಮಾದ ಸೀಕ್ವೆಲ್ ಅನ್ನು ಮಾಡೋದಕ್ಕೆ ಆಲೋಚನೆಯನ್ನು ಮಾಡಲಾಗಿದ್ದು, ಹೊಸ ಪಾತ್ರವರ್ಗದೊಂದಿಗೆ ಸಿನಿಮಾ ಮಾಡಲು ನಿರ್ಧರಿಸಿದ್ದರು, ಸಿನಿಮಾದ ಸ್ಕ್ರಿಪ್ಟ್ ಕೂಡಾ ಫೈನಲ್ ಆಗಿದೆ. ಬರೋಬ್ಬರಿ 31 ವರ್ಷಗಳ ನಂತರ ಖಳ್ ನಾಯಕ್ ಸಿನಿಮಾದ ಸೀಕ್ವೆಲ್ ಎನ್ನುವ ಸುದ್ದಿ ಕೇಳಿ ಸಿನಿ ಪ್ರೇಮಿಗಳು ಸಹಾ ಸಾಕಷ್ಟು ಉತ್ಸುಕರಾಗಿದ್ದಾರೆ. ಸುಭಾಷ್ ಘಾಯ್ ಅವರ ಹೊಸ ಯೋಜನೆ ಎಲ್ಲರ ಗಮನ ಸೆಳೆದಿದೆ.

ಸುಭಾಷ್ ಘಾಯ್ (Subhash Ghai) ಅವರು ಖಳ್ ನಾಯಕ್ ನಲ್ಲಿ ನಾಯಕನ ಪಾತ್ರಕ್ಕೆ ರಣ್ವೀರ್ ಸಿಂಗ್ ಅಥವಾ ರಣಬೀರ್ ಕಪೂರ್ ನ ಅಪ್ರೋಚ್ ಮಾಡೋ ಸಾಧ್ಯತೆ ಇದೆ ಎನ್ನಲಾಗಿದೆ. ಅಲ್ಲದೇ ಅವರ ಲಿಸ್ಟ್ ನಲ್ಲಿ ಯಶ್ ಅವರ ಹೆಸರು ಕೂಡಾ ಇದೆ ಅನ್ನೋದು ವಿಶೇಷವಾಗಿದೆ. ಅಲ್ಲದೇ ಅವರು ಅಲ್ಲು ಅರ್ಜುನ್ (Allu Arjun) ಹೆಸರನ್ನು ಸಹಾ ಪ್ರಸ್ತಾಪ ಮಾಡಿದ್ದಾರೆ. ‌ಒಟ್ನಲ್ಲಿ ಅವಕಾಶ ಯಾರಿಗೆ ಸಿಗುತ್ತೆ ಅನ್ನೋದನ್ನ ಕಾದು ನೋಡಬೇಕಾಗಿದೆ.

Soma Shekar

Recent Posts

Kiara Advani: ಕಾನ್ ಸಿನಿಮೋತ್ಸವದಲ್ಲಿ ಅಂದದ ಕಿಚ್ಚು ಹೊತ್ತಿಸಿದ ಕಿಯಾರಾ ಸೌಂದರ್ಯಕ್ಕೆ ಫ್ಯಾನ್ಸ್ ಫಿದಾ

Kiara Advani: ಕಾನ್ (Cannes 2024) ಸಿನಿಮಾ ಉತ್ಸವ ಬಂತೆಂದರೆ ಅಲ್ಲಿ ವಿಶ್ವದ ಸಿನಿಮಾ ತಾರೆಯರ ಚಿತ್ರ ವಿಚಿತ್ರ ಹಾಗೂ…

6 hours ago

Pavithra Jayram: ಪವಿತ್ರ ಕರೀತಿದ್ದಾಳೆ ಅಂತ ಹೆಂಡ್ತಿ ಮಕ್ಕಳನ್ನ ಮರೆತು ಸಾವಿಗೆ ಶರಣಾದ ಚಂದು

Pavithra Jayaram: ತ್ರಿನಯನಿ (Trinayani) ತೆಲುಗು ಸೀರಿಯಲ್ ಮೂಲಕ ಸಾಕಷ್ಟು ಜನಪ್ರಿಯತೆಯನ್ನು ಪಡೆದುಕೊಂಡಿದ್ದ ನಟಿ ಪವಿತ್ರಾ ಜಯರಾಂ (Pavithra Jayaram)…

8 hours ago

Brundavana Serial: ಬೃಂದಾವನ ಸೀರಿಯಲ್ ಪ್ರೇಕ್ಷಕರಿಗೆ ಬ್ಯಾಡ್ ನ್ಯೂಸ್; ಇದನ್ನ ಯಾರೂ ನಿರೀಕ್ಷೆ ಮಾಡಿರ್ಲಿಲ್ಲ

Brundavana Serial: ಕನ್ನಡ ಕಿರುತೆರೆಯಲ್ಲಿ ಬೃಂದಾವನ ಸೀರಿಯಲ್ (Brundavana Serial) ತನ್ನದೇ ಆದ ಒಂದು ಸ್ಥಾನವನ್ನು ಪಡೆದುಕೊಂಡು ಜನಪ್ರಿಯತೆಯನ್ನು ಪಡೆದುಕೊಂಡಿದೆ.…

14 hours ago

Sai Pallavi: ಮಾಡಲ್ಲ, ಮಾಡಲ್ಲ ಅಂತಾನೇ ಗ್ರೀನ್ ಸಿಗ್ನಲ್ ಕೊಟ್ಟಿದ್ಯಾಕೆ? ಶಾಕ್ ನಲ್ಲಿ ಸಾಯಿಪಲ್ಲವಿ ಫ್ಯಾನ್ಸ್

Sai Pallavi: ದಕ್ಷಿಣ ಸಿನಿಮಾ ರಂಗದ ಸ್ಟಾರ್ ನಟಿ ಸಾಯಿ ಪಲ್ಲವಿ (Sai Pallavi) ಈಗ ಪ್ಯಾನ್ ಇಂಡಿಯಾ ಸ್ಟಾರ್…

15 hours ago

Rashmika Mandanna: ಅಟಲ್ ಸೇತುವನ್ನು ಹೊಗಳಿದ ರಶ್ಮಿಕಾ ಮೇಲೆ ಸಿಡಿದೆದ್ದ ಕೇರಳ ಕಾಂಗ್ರೆಸ್ ಘಟಕ

Rashmika Mandanna: ಸೌತ್ ಬ್ಯೂಟಿ ರಶ್ಮಿಕಾ (Rashmika Mandanna) ಮತ್ತೊಮ್ಮೆ ಸಿಕ್ಕಾಪಟ್ಟೆ ಸುದ್ದಿಯಾಗಿದ್ದಾರೆ. ಈ ಬಾರಿ ನಟಿ ಯಾವುದೇ ಸಿನಿಮಾದ…

17 hours ago

Prabhas: ಅವರಿಬ್ಬರು ಸಲಿಂಗಕಾಮಿಗಳು, ಲಂಡನ್ ನಲ್ಲಿ ನನ್ನ ಗಂಡನ ಜೊತೆ, ಸುಚಿತ್ರಾ ಶಾಕಿಂಗ್ ಹೇಳಿಕೆ

Suchithra : ಗಾಯಕಿ ಸುಚಿತ್ರಾ ರಾಮದುರೈ (Suchithra) ಅವರು ಮೊನ್ನೆ ಮೊನ್ನೆಯಷ್ಟೇ ತಮ್ಮ ಮಾಜಿ ಪತಿ ತಮಿಳು ನಟ ಕಾರ್ತಿಕ್…

1 day ago

This website uses cookies.