News

Rashmi Gautam: ಹಸಿದ ಮಹಿಳೆ ಬಾಯಿಗೆ ಅನ್ನ ಇಡಿ, ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ರಶ್ಮಿ ಆಕ್ರೋಶ

Rashmi Gautam: ಪ್ರಜ್ವಲ್ ರೇವಣ್ಣ (Prajawal Revanna Pen drive) ಅವ್ರ ಪೆನ್ ಡ್ರೈವ್ ಪ್ರಕರಣ ರಾಜ್ಯ ಮಾತ್ರವೇ ಅಲ್ಲ ಇಡೀ ದೇಶದಲ್ಲಿ ಸದ್ದು ಮತ್ತು ಸುದ್ದಿಯನ್ನು ಮಾಡಿದೆ. ಈ ವಿಚಾರ ಹೊರ ಬಂದ ಮೇಲೆ ಸೋಶಿಯಲ್ ಮೀಡಿಯಾಗಳಲ್ಲಿ ಅನೇಕರು ಅಸಹನೆ, ಅಸಮಾಧಾನ ಮತ್ತು ಆಕ್ರೋಶವನ್ನು ಹೊರ ಹಾಕಿದ್ದಾರೆ. ಪ್ರಜ್ವಲ್ ರೇವಣ್ಣ ಅವ್ರನ್ನ ನಿಂದನೆ ಮಾಡಿದ್ದಾರೆ, ಟೀಕಿಸಿದ್ದಾರೆ ಹಾಗೂ ಸರಿಯಾದ ಕಠಿಣ ಶಿಕ್ಷೆ ಆಗಬೇಕೆಂದು ಆಗ್ರಹ ವನ್ನ ಮಾಡುತ್ತಿದ್ದಾರೆ. ಇದೇ ವಿಚಾರವಾಗಿ ನಟಿ ಪೂನಂ ಕೌರ್ ಅವರು ತಮ್ಮ ಆಕ್ರೋಶವನ್ನು ಹೊರ ಹಾಕಿದ್ದರು.

ಈಗ ಇದೇ ವಿಚಾರವಾಗಿ ತೆಲುಗಿನ ನಟಿ ಮತ್ತು ಸ್ಟಾರ್ ನಿರೂಪಕಿಯಾಗಿರುವ ರಷ್ಮಿ ಗೌತಮ್ (Rashmi Gautam) ಸಹಾ ತಮ್ಮ ಪ್ರತಿಕ್ರಿಯೆಯನ್ನು ನೀಡುವ ಮೂಲಕ ಎಲ್ಲರ ಗಮನವನ್ನು ಸೆಳೆದಿದ್ದಾರೆ. ‌ಇಡೀ ದೇಶದಲ್ಲಿ ಸಂಚಲನ ಸೃಷ್ಟಿಸಿರುವ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದ ನಟಿ ಮತ್ತು ಕಾಂಗ್ರೆಸ್ ನ ಕಾರ್ಯಕರ್ತೆ ಆಗಿರುವ ಪೂನಂ ಕೌರ್ (Poonam Kaur)ಅವರು ಅಧಿಕಾರದಲ್ಲಿರುವ ವ್ಯಕ್ತಿಗಳ ಮಕ್ಕಳು ಮಹಿಳೆಯರನ್ನು ದುರುಪಯೋಗ ಪಡಿಸಿಕೊಳ್ಳುತ್ತಾರೆ ಎಂದು ಟೀಕೆ ಮಾಡಿದ್ದರು.

ಅಲ್ಲದೇ ಅವರು ಬಹಳ ಸುಲಭವಾಗಿ ಅದರಿಂದ ಬಚಾವಾಗುತ್ತಾರೆ ಎಂದು ಕೆಲವು ಉದಾಹರಣೆಗಳನ್ನು ಸಹಾ ನೀಡಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡು, ಪ್ರಜ್ವಲ್ ರೇವಣ್ಣ ಬಗ್ಗೆ ಮಾತನಾಡಿದ್ದರು. ಅವನೊಬ್ಬ ರಾಕ್ಷಸೀ ಪ್ರವೃತ್ತಿಯ ವ್ಯಕ್ತಿ ಎಂದೂ, 2,800 ಕ್ಕೂ ಹೆಚ್ಚು ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂಬುದಾಗಿಯೂ ಆರೋಪವನ್ನು ಮಾಡಿದ್ದರು.

ಈಗ ಇದೇ ವಿಚಾರವಾಗಿ ನಟಿ, ನಿರೂಪಕಿ ರಶ್ಮಿ ಗೌತಮ್ ಸೋಶಿಯಲ್ ಮೀಡಿಯಾದಲ್ಲೊಂದು ಪೋಸ್ಟ್ ಅನ್ನ ಶೇರ್ ಮಾಡಿಕೊಂಡಿದ್ದು, ಅದರಲ್ಲಿ “ಮಹಿಳೆ ಬಡವಳಾಗಿದ್ದು, ಹಸಿದಿರುವಾಗ ಬಾಯಿಗೆ ಅನ್ನ ಕೊಡಿ, ನಿನ್ನ ಅದನ್ನಲ್ಲ” ಎಂದು ಪ್ರಖ್ಯಾತ ಬ್ರಿಟನ್​​​ ಲೇಖಕಿಯಾಗಿರುವ ರಾಷೆಲ್ ​​ಮೊರಾನ್ ಅವರ ಒಂದು ಸಂದೇಶವನ್ನು ಶೇರ್ ಮಾಡಿಕೊಂಡಿದ್ದು, ಈ ಪೋಸ್ಟ್ ವೈರಲ್ ಆಗಿ, ಒಂದಷ್ಟು ಚರ್ಚೆಗೆ ಕಾರಣವಾಗಿದೆ.

Soma Shekar

Recent Posts

SeethaRama: ಭಾರ್ಗವಿಯ ಕುತಂತ್ರಕ್ಕೆ ಬಲಿಯಾದ ಅಶೋಕ; ಪ್ರಜ್ಞೆ ತಪ್ಪಿದ ಅಶೋಕನ ರಕ್ಷಣೆಗೆ ಯಾರು ಬರ್ತಾರೆ?

SeethaRama : ಸೀತಾಳ ಮನೆಗೆ ದೇಸಾಯಿ ಕುಟುಂಬದವರೆಲ್ಲರೂ ಆಗಮಿಸಿದ್ದಾರೆ. ಶಾಸ್ತ್ರೋಕ್ತವಾಗಿ ಹೆಣ್ಣನ್ನು ಕೇಳುವ ಶಾಸ್ತ್ರವನ್ನು ಬಹಳ ಖುಷಿಯಿಂದ ಮಾಡುತ್ತಿದ್ದಾರೆ ಸೂರ್ಯ…

2 hours ago

Ninagagi Serial: ಹೊಸ ಸೀರಿಯಲ್ ಘೋಷಣೆ, ದಿವ್ಯ ಉರುಡುಗ ಎಂಟ್ರಿ, ಬೃಂದಾವನ ಸೀರಿಯಲ್ ಎಕ್ಸಿಟ್? ಪ್ರೇಕ್ಷಕರಿಗೆ ಟೆನ್ಷನ್

Ninagagi Serial: ಕನ್ನಡ ಸಿನಿಮಾ ಮತ್ತು ಕಿರುತೆರೆಯಲ್ಲಿ ಹೆಸರನ್ನು ಮಾಡಿರುವ ನಟಿಯರಲ್ಲಿ ದಿವ್ಯ ಉರುಡುಗ (Divya Uruduga) ಅವರು ಬಿಗ್…

20 hours ago

Chandini: ‘ಎ’ ನನ್ನ ಜೀವನ ಬದಲಿಸಿದ ಸಿನಿಮಾ: ರೀ ರಿಲೀಸ್ ವೇಳೆ ಎ ಸಿನಿಮಾ ನಟಿ ಚಾಂದಿನಿ ಮನಸ್ಸಿನ ಮಾತು

Chandini: ಕನ್ನಡ ಸಿನಿಮಾ ರಂಗದಲ್ಲಿ ಕೆಲವೊಂದು ಸಿನಿಮಾಗಳು ಎವರ್ ಗ್ರೀನ್ ಸಿನಿಮಾಗಳಾಗಿ ಜನರ ಮನಸ್ಸಿನಲ್ಲಿ ಸ್ಥಾನವನ್ನು ಪಡೆದಿದೆ. ಕೆಲವೊಂದು ಸಿನಿಮಾಗಳು…

22 hours ago

Tollywood Heroins: ಮೊದಲ ಸಿನಿಮಾದಿಂದಲೇ ಸ್ಟಾರ್ ಗಳಾದ ಈ ಇಬ್ಬರ ಅಬ್ಬರ ತಗ್ಗಿದ್ದೇಕೆ? ಚಾನ್ಸ್ ಸಿಕ್ತಿಲ್ಲ ಯಾಕೆ?

Tollywood Heroins: ಸಿನಿಮಾ ರಂಗದಲ್ಲಿ ಕೆಲವು ನಟ ನಟಿಯರಿಗೆ ಮೊದಲ ಸಿನಿಮಾದ ಮೂಲಕವೇ ದೊಡ್ಡ ಕ್ರೇಜ್ ಸೃಷ್ಟಿಯಾಗುತ್ತದೆ ಮತ್ತು ಒಂದೇ…

1 day ago

Amruthadhaare: ಗೌತಮ್ ಭೂಮಿಕಾ ಹೊರಟ ಕೂಡಲೇ ತನ್ನ ಅಸಲಿ ಮುಖ ತೋರಿಸಿದ ಜೈದೇವ್; ಮಲ್ಲಿ ಕಥೆ ಮುಗೀತಾ?

Amruthadhaare : ಅಮೃತಧಾರೆ (Amruthadhaare) ಸೀರಿಯಲ್ ನಲ್ಲಿ ಗೌತಮ್ ಮತ್ತು ಭೂಮಿಕಾ ಖುಷಿಯಾಗಿ ಚಿಕ್ಕಮಗಳೂರಿನ ಕಡೆಗೆ ಹೊರಟಿದ್ದಾರೆ. ಅಲ್ಲಿನ ಪ್ರಕೃತಿ…

1 day ago

Bhumika Ramesh: ಲಕ್ಷ್ಮೀ ಬಾರಮ್ಮ ಸೀರಿಯಲ್ ಗೆ ಗುಡ್ ಬೈ ಹೇಳ್ತಾರಾ ಭೂಮಿಕಾ; ತೆಲುಗಲ್ಲಿ ಹೊಸ ಆಫರ್

Bhumika Ramesh: ಇತ್ತೀಚಿನ ದಿನಗಳಲ್ಲಿ ತೆಲುಗು ಕಿರುತೆರೆಯಲ್ಲಿ (Telugu Television) ಕನ್ನಡ ಕಲಾವಿದ್ದರದ್ದೇ ಪಾರುಪತ್ಯ ಎನ್ನುವುದರಲ್ಲಿ ಎರಡು ಮಾತಿಲ್ಲ. ತೆಲುಗು…

1 day ago

This website uses cookies.